ಗೌರಿಬಿದನೂರು: ಹದಿನೈದು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್

Picture of Savistara

Savistara

Bureau Report

ಗೌರಿಬಿದನೂರು: ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಕ್ರಿಶ್ಚಿಯನ್ಧರ್ಮಕ್ಕೆ ಮತಾಂತರಗೊಂಡಿದ್ದ ಹದಿನೈದು ಕುಟುಂಬಗಳ ಫರ್ ವಾಪಸಿ ಕಾರ್ಯಕ್ರಮ ನಡೆಯಿತು.

ಹಲವು ವರ್ಷಗಳ ಹಿಂದೆ ನಾಗಸಂದ್ರ, ಗಾಂಧಿನಗರ, ಕದಿರೇನಹಳ್ಳಿ ಹಾಗೂ ನೆರೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡಿದ್ದ ಹದಿನೈದು ಕುಟುಂಬಗಳನ್ನು ಮರಳಿ ಹಿಂದೂ ಧರ್ಮಕ್ಕೆ ವಾಪಸ್ ಕರೆ ತರಲಾಯಿತು.ಭಾನುವಾರ ವಿದುರಾಶ್ವತ್ಥ ಅಶ್ವತ್ಥನಾರಾಯಣಸ್ವಾಮಿ ದೇಗುದಲ್ಲಿ ನಡೆದ ಘ‌ರ್ ವಾಪಸಿ ಕಾರ್ಯವನ್ನು ಶಾಸ್ರೋಕ್ತವಾಗಿ ನಡೆಸಲಾಯಿತು.ಮುಖಂಡ ರವಿನಾರಾಯಣರೆಡ್ಡಿ ಮಾತನಾಡಿ, ವಿಶ್ವದ ಎಲ್ಲೆಡೆ ಜನರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮ ಸ್ವೀಕರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲ ಕ್ರೈಸ್ತ ಮಿಷನರಿಗಳು ತೋರುವ ಅಮಿಷಕ್ಕೆ ಬಲಿಯಾಗಿ ಮತಾಂತರಗೊಳ್ಳುತ್ತಿದ್ದಾರೆ. ನಂತರ ಅವರು ನಡೆಸುವ ತಾರತಮ್ಯ ಕಂಡು ಪಶ್ಚಾತ್ತಾಪ ಪಡುತ್ತಿರುತ್ತಾರೆ. ಈಗಾಗಲೇ ಇಂತವರನ್ನು ಗುರುತಿಸಿ ಅವರ ಮನವೊಲಿಸಿ ಮತ್ತೆ ಮಾತೃ ಧರ್ಮಕ್ಕೆ ಕರೆ ತರುವ ಕೆಲಸ ನಿರಂತರವಾಗಿ ನಡೆದಿದೆ ಎಂದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!