ಆ.2 : ಸುಳ್ಯದಲ್ಲಿ ಮಂಥನ ವೇದಿಕೆ ಯ ಇದರ ವತಿಯಿಂದ ಸಿಂದೂರ ವಿಜಯ-ಭಾರತದತ್ತ ವಿಶ್ವದ ಚಿತ್ತ | ಸಂಸದ ಕ್ಯಾ.ಚೌಟ ರೊಂದಿಗೆ ರಾಷ್ಟ್ರೀಯ ವಿಚಾರಗಳ ಸಂವಾದ ಕಾರ್ಯಕ್ರಮ

Picture of Savistara

Savistara

Bureau Report

ಸುಳ್ಯ: ಮಂಥನ ವೇದಿಕೆ ಸುಳ್ಯ ವತಿಯಿಂದ ಸಿಂಧೂರ ವಿಜಯ ಭಾರತದತ್ತ ವಿಶ್ವದ ಚಿತ್ತ’ ರಾಷ್ಟ್ರೀಯ ವಿಚಾರಗಳ ಸಂವಾದ ಕಾರ್ಯಕ್ರನ ಆಗಸ್ಟ್ 2 ಶನಿವಾರ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಥನ ವೇದಿಕೆ ಸಂಚಾಲಕ ಪ್ರದ್ಯುಮ್ನ ಉಬರಡ್ಕ ತಿಳಿಸಿದರು. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಸಿಂಧೂರ ವಿಜಯದಿಂದ ಇದೀಗ ವಿಶ್ವವೇ

ಭಾರತದತ್ತ ತಿರುಗಿ ನೋಡುವಂತಾಗಿದೆ. ಸಿಂಧೂರ ವಿಜಯ ಒಂದು ಐತಿಹಾಸಿಕ ಗೆಲುವು. ವಿಶ್ವದ ನಾನಾ ರಾಷ್ಟ್ರಗಳಲ್ಲಿ ಭಾರತದ ಐತಿಹಾಸಿಕ ಗೆಲುವಿನ ಕುರಿತು ಸಂವಾದ ನಡೆಸಿದ ತಂಡದ ಸದಸ್ಯರಾದ ನಿವೃತ್ತ ಕ್ಯಾಪ್ಟನ್ ದ.ಕ.ಸಂಸದ ಬೃಜೇಶ್ ಚೌಟ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ

ವಕೀಲರು, ವೈದ್ಯರು, ಉಪನ್ಯಾಸಕರು ಹಾಗೂ ಶಿಕ್ಷಕರು ಮತ್ತು ಚಿಂತಕರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ನಮನ ಸಲ್ಲಿಸಿ ಬಳಿಕ ಸಿಂಧೂರ ಹೋರಾಟದ ವಿಡಿಯೋ ತುಣುಕು ಪ್ರದರ್ಶನ ನಡೆಯಲಿದೆ ಸುದ್ದಿಗೋಷ್ಟಿಯಲ್ಲಿ ಮಂಥನ ವೇದಿಕೆಯ ಸದಸ್ಯರಾದ ಎ.ಟಿ ಕುಸುಮಾಧರ, ಆರ್.ಕೆ.ಭಟ್ ಕುರುಂಬುಡೇಲು, ನಿವೃತ್ತ ಯೋಧ ಗುರುಪ್ರಸಾದ್ ರೈ ಪೇರಾಲುಗುತ್ತು, ಅನೂಪ್‌ ಬಿಳಿಮಲೆ, ಜಗದೀಶ್, ರಜತ್ ಅಡ್ಕಾರು, ಜಗನ್ನಾಥ ಜಯನಗರ, ಕಿಶನ್ ಜಬಳೆ, ಹೇಮಂತ್ ಮಠ ಮತ್ತಿತರರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!