ಮಾಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Picture of Savistara

Savistara

Bureau Report

ಬೆಳ್ತಂಗಡಿ : ಜು 27 ಬೆಳ್ತಂಗಡಿ ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗಿಯಾದರು.

ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ, ಪಂಚಾಯತ್ ಸದಸ್ಯರುಗಳಾದ ಶ್ರೀ ದಿನೇಶ್ ಕರ್ಕೇರ ಮತ್ತು ಶ್ರೀ ರಾಜೇಶ ಕೊಡ್ಯೇಲು, ಮಾಲಾಡಿ ಪಂಚಾಯತ್ ಸದಸ್ಯೆ- ಮಂಡಲ ಬಿಜೆಪಿ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಸೋಣಂದೂರು ಬಿಜೆಪಿ ಬೂತ್ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ,

ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಮತ್ತು ಶ್ರೀಮತಿ ಧನಲಕ್ಷ್ಮಿ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!