ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಹಾಗೂ ಶಿಥಿಲವಾಗಿರುವ ಅರಾಟೆ ಸೇತುವೆ ಪುನರ್ ನಿರ್ಮಾಣಕ್ಕೆ ಸಂಸದ ಬಿ.ವೈ ರಾಘವೇಂದ್ರ ಮನವಿ

Picture of Savistara

Savistara

Bureau Report

ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

1) ಬಹುಕಾಲದ ಬೇಡಿಕೆಯಾದ ಗಂಗೊಳ್ಳಿ-ಕುಂದಾಪುರ ಸೇತುವೆ ಪ್ರಸ್ತಾವನೆಗೆ ಅನುಮೋದನೆ ನೀಡಿ ಮಂಜೂರು ಮಾಡಲು ಕೋರಿದರು. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಸೇತುವೆಯ ಸಂಪರ್ಕವಿಲ್ಲದೆ ಸುಮಾರು 18 ಕಿ. ಮೀ ಸುತ್ತಿ ಬಳಸಿ ಕುಂದಾಪುರ ತಲುಪಬೇಕಾಗಿದೆ. ಇದರಿಂದ ಇಲ್ಲಿನ ಗ್ರಾಮಸ್ಥರಿಗೆ ತುರ್ತು ಆರೋಗ್ಯ ಸಮಸ್ಯೆಯ ಸಂಧರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸೇತುವೆಯ ನಿರ್ಮಾಣದಿಂದ ವಾಣಿಜ್ಯ ವಹಿವಾಟಿಗೂ ಅನುಕೂಲಕರವಾಗಿ ಆರ್ಥಿಕತೆಗೆ ಬಲ ತುಂಬಲಿದೆ ಎಂದು ಮನವರಿಕೆ ಮಾಡಿದರು.

2) ರಾಷ್ಟ್ರೀಯ ಹೆದ್ದಾರಿ-66 ರ ಅರಾಟೆ ಸೇತುವೆಯು ಶಿಥಿಲಗೊಂಡಿದ್ದು ಕಳೆದ ಹಲವಾರು ತಿಂಗಳಿನಿಂದ ಎಲ್ಲಾ ನಾಲ್ಕು ಪಥದಲ್ಲಿ ಸಂಚರಿಸಬೇಕಾದ ವಾಹನಗಳು ದ್ವಿಪಥದಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಆದಷ್ಟು ಶೀಘ್ರದಲ್ಲಿ ಹಳೆಯ ಅರಾಟೆ ಸೇತುವೆಯನ್ನು ಪುನರ್ ನಿರ್ಮಾಣ ಮಾಡಲು ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಮನವಿ ಮಾಡಿದರು.

3) ಬೈಂದೂರು ತಾಲೂಕು ಕಛೇರಿ ಬಳಿ ಅಂಡರ್ ಪಾಸ್ ನಿರ್ಮಿಸಲು ಹಾಗೂ ಒತ್ತಿನೆಣೆ ಶ್ರೀ ರಾಘವೇಂದ್ರ ಮಠದವರೆಗೆ ಸರ್ವಿಸ್ ರಸ್ತೆ ನಿರ್ಮಿಸಲು ಮನವಿ ಮಾಡಿದರು.

ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ ಶೀಘ್ರದಲ್ಲಿ ಎಲ್ಲಾ ಮನವಿಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!