ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ನಿರ್ಮಾಣ ಮಾಡಲಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ, ಶಂಕು ಸ್ಥಾಪನೆ ಆ. 3ರಂದು ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜ್ಯೋತಿಪ್ರಕಾಶ್ ಅವರು, ಉಪಾಧ್ಯಕ್ಷರಾದ ಶ್ರೀಮತಿ ಶಾಂತ ಆನಂದ್ ಅವರು, ಕಾರ್ಯದರ್ಶಿಗಳಾದ ದಿನೇಶ್ ಅವರು,

ಸಹ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್ ಅವರು ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.














































