ತೋಟಗಾರಿಕೆ ಇಲಾಖೆಯು 2025ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ವಿಮೆ ಕಂತನ್ನು ಪಾವತಿಸುವ ಅವಧಿಯನ್ನು ಆ.14ರ ವರೆಗೆ ವಿಸ್ತರಿಸಿದೆ.
ಈ ಹಿಂದೆ ಜುಲೈ 31ಕ್ಕೆ ಕಂತು ಪಾವತಿಗೆ ಕೊನೆಯ ದಿನವಾಗಿತ್ತು. ರೈತರ ಹಿತದೃಷ್ಟಿಯಿಂದ ಅವಧಿ ವಿಸ್ತರಿಸಲಾಗಿದೆ.ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಬ್ಯಾಂಕ್ ಶಾಖೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.













































