ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ಯನ್ನು ಪುನಶ್ಚತನಗೊಳಿಸುವ ನಿಟ್ಟಿನಲ್ಲಿ ಸಂಸದ ಬ್ರಿಜೇಶ್ ಚೌಟ ಅವರ ನೇತೃತ್ವದ ಕುದುರೆಮುಖ ಮನ್ಸೂರ್ ಸಂಘದ ನಿಯೋಗವು ನವದೆಹಲಿಯ ಗೃಹ ಕಚೇರಿಯಲ್ಲಿ ಭಾರತದ ಭಾರೀ ಕೈಗಾರಿಕೆಗಳು ಮತ್ತು ಉಕ್ಕಿನ ಸಚಿವ ಹೆಚ್. ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಚರ್ಚಿಸಿತು.

ಸಂಸ್ಥೆಯನ್ನು ಉಳಿಸಿ ಕಾರ್ಮಿಕರ ಹಿತ ರಕ್ಷಿಸುವ ನಿಟ್ಟಿನಲ್ಲಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.ಸಂಸದರಾದ ಶ್ರೀ ಶ್ರೀನಿವಾಸ ಪೂಜಾರಿ ಅವರು ಈ ಸಂದರ್ಭದಲ್ಲಿ ಇದ್ದರು.













































