ಧರ್ಮಸ್ಥಳದ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಅನುಮಾನ
ಮಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲುವಿದೇಶಿ ಹಣ ಬಳಕೆ ಮಾಡಲಾಗಿದೆ ಎಂಬ ಅನುಮಾನವಿದೆ. ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಹೇಳಿದರು.ಗುರುವಾರ (ಆ.07) ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ಯಾರ ಮೇಲೆ ಆರೋಪ ಮಾಡಿದ್ದಾನೆ ಎಂದು ಇನ್ನೂ ದೃಢಪಟ್ಟಿಲ್ಲ. ಹೀಗಿರುವಾಗ ಯಾವುದೇ ಸುದ್ದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಶ್ರೀ ಮಂಜುನಾಥ ಸ್ವಾಮಿಗಳ ಫೋಟೊ ಬಳಕೆ ತಪ್ಪು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಹೀಗಾಗಿ ಇದೇ ತಿಂಗಳು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ ಎಂದರು.ಧರ್ಮಸ್ಥಳ ವಿರುದ್ದ ಕೆಲ ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್ಗಳಿಂದ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ. ಇದರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಗಿಳಿಯಾರ್ ಆಗ್ರಹಿಸಿದರು.













































