ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

Picture of Savistara

Savistara

Bureau Report

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.

ಕಡಬ ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಸದರಿ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಂತೆ, ಮತ್ತು ಜಿಲ್ಲೆಯಲ್ಲಿರುವ MRF ಘಟಕಗಳಿಗೆ ನಿರಂತರ ವಿದ್ಯುತ್ ಪೂರೈಸುವಂತೆ ಚರ್ಚಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳಾ ರೆಸೊರ್ಸ್ ಸಂಸ್ಥೆಯ ಎಂ.ಡಿ ದಿಲ್ ರಾಜ್ ಆಳ್ವ ರವರು ಉಪಸ್ಥಿತರಿದ್ದರು.

[t4b-ticker]
error: Content is protected !!