ಮಂಗಳೂರು : ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಭೇಟಿ, ಅಹವಾಲು ಸ್ವೀಕಾರ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟರವರು ಆ.13 ರಂದು ಮಂಗಳೂರಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿರುವ

ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ.

ಇಂದಿನ ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ ಹಲವು ನಾಗರಿಕರ ಅಹವಾಲುಗಳನ್ನು

ಆಲಿಸಿದ ಸಂಸದರು, ಸ್ಥಳದಲ್ಲೇ ಪರಿಹಾರ ಒದಗಿಸಿದ್ದು, ಇನ್ನು ಕೆಲ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

[t4b-ticker]
error: Content is protected !!