ಮೈಸೂರು |ಜಾಥಕ್ಕೆ ಅನುಮತಿನಿರಾಕರಣೆ: ಎಬಿವಿಪಿ ಕಾರ್ಯಕರ್ತರ ಆಕ್ರೋಶ

Picture of Savistara

Savistara

Bureau Report

ಮೈಸೂರು: ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ (ಎಬಿವಿಪಿ) ಕಾರ್ಯಕರ್ತರು ಡ್ರಗ್ಸ್ ವಿರುದ್ಧ ಮಂಗಳವಾರ ಗನ್ ಹೌಸ್ ವೃತ್ತದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಅವಕಾಶ ನೀಡದ ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟಿಸಿದರು.

ಸಂಘಟನೆಯು ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮಂಗಳೂರು, ಪುತ್ತೂರು, ಮಡಿಕೇರಿ, ಹಾಸನ ಭಾಗದ ಕಾರ್ಯಕರ್ತರೂ ಆಗಮಿಸಿದ್ದರು. ಜಾಥಾಕ್ಕರ ಅವಕಾಶ ಸಿಗದಿದ್ದಾಗ ಗನ್ ಹೌಸ್ ವೃತ್ತದ ಬಸವಣ್ಣ ಪ್ರತಿಮೆ ಬಳಿ ರಸ್ತೆಯಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದರು.ಪ್ರತಿಭಟನಾಕಾರರು ಮಾತನಾಡುತ್ತಿದ್ದ ಸಮಯದಲ್ಲಿ ಮತ್ತೊಂದು ರಸ್ತೆಯಿಂದಾಗಿ ಬಂದ ಎಬಿವಿಪಿ ಕಾರ್ಯಕರ್ತರ ಗುಂಪು ಜಾಥಾ ನಡೆಸಲು ಮುಂದಾಯಿತು. ಪೊಲೀಸರು ತಡೆದಾಗ ಮಾತಿನ ಚಕಮಕಿ ನಡೆಯಿತು. ಪೊಲೀಸರ ಕ್ರಮವನ್ನು ಖಂಡಿಸಿ, ಗೃಹಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿದರು.

[t4b-ticker]
error: Content is protected !!