ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸ್ಥಾಪಿಸಿ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಓಡಾಟದಲ್ಲಿ ತೊಡಗಿರುವ ನಟ ವಿಜಯ್ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮಧುರೈ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ.
ಚೆನ್ನೈ, ಆ.23: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸ್ಥಾಪಿಸಿತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಓಡಾಟದಲ್ಲಿ ತೊಡಗಿರುವ ನಟ ವಿಜಯ್ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮಧುರೈ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಆದರೆ ಅದಿನ್ನೂ ಪೂರ್ಣ ಖಚಿತವಾಗಿಲ್ಲ.ತಮಿಳುನಾಡಿನ ಎರಡು ಪ್ರಬಲ ದ್ರಾವಿಡ ಪಕ್ಷಗಳ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿರುವ ವಿಜಯ್, 20260 ವಿಧಾನಸಭಾ ಚುನಾವಣೆಯಲ್ಲಿ ಮಧುರೈ ಪೂರ್ವದಿಂದ ಸ್ಪರ್ಧಿಸಬಹುದೆಂದು ಗುರುವಾರ ಸುಳಿವು ನೀಡಿದ್ದು, ಅಲ್ಲಿನ ಜನ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಆಯ್ಕೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ನಾವು ಕಳೆದ ಚುನಾವಣೆಗಳಲ್ಲಿ ಎರಡು ಎಲೆ ಮತ್ತು ಉದಯಿಸುವ ಸೂರ್ಯನಿಗೆ ಮತ ಹಾಕಿದ್ದೇವೆ. ಆದರೆ ಈ ಬಾರಿ ಅದು “ವಿಜಯ್ಗೆ” ಎಂದು ದಿನಗೂಲಿ ನೌಕರರೊಬ್ಬರು ಎಐಎಡಿಎಂಕೆ ಮತ್ತು ಡಿಎಂಕೆ ಚುನಾವಣಾ ಚಿಹ್ನೆಗಳನ್ನು ಉಲ್ಲೇಖಿಸಿದ್ದಾರೆ. ತಮಿಳುನಾಡಿನಲ್ಲಿ ಮಹಿಳೆಯರು ಹೊರಗೆ ಹೋಗಲು ಸಾಧ್ಯವಿಲ್ಲ, ನಾವು ಎಲ್ಲಿಯೂ ಒಂಟಿಯಾಗಿ ಹೋಗಲು ಸಾಧ್ಯವಾಗುತ್ತಿಲ್ಲ. ಎಂಜಿಆರ್ ನಂತರ, ಜನರನ್ನು ತನ್ನವರೇ ಎಂದು ನೋಡುತ್ತಿರುವುದು ವಿಜಯ್ ಒಬ್ಬರೇ.ಅವರಿಗೇ ನಮ್ಮ ಮತ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ.ಮಧುರೈ ಪೂರ್ವ ಐತಿಹಾಸಿಕವಾಗಿ ಪ್ರಮುಖ ಕ್ಷೇತ್ರ. 1990ರ ದಶಕದ ವರೆಗೆ ಕಮ್ಯುನಿಸ್ಟರು ಮತ್ತು ಎಐಎಡಿಎಂಕೆ ಪ್ರಾಬಲ್ಯ ಹೊಂದಿದ್ದ ಈ ಕ್ಷೇತ್ರದಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ನಂತರ ಡಿಎಂಕೆ, ಕಳೆದ ಮೂರು ಚುನಾವಣೆಗಳಲ್ಲಿ ಎರಡನ್ನು ಗೆದ್ದಿದೆ. ಮಧುರೈ ಪೂರ್ವ ಕ್ಷೇತ್ರವನ್ನು ಯಾವ ಪಕ್ಷ ಪಡೆದುಕೊಂಡರೂ ಅದು ಚೆನ್ನೈನಲ್ಲಿ ಅಧಿಕಾರವನ್ನು ಸ್ಥಾಪಿಸುತ್ತದೆ ಎಂಬುದು ಜನಜನಿತ. ಮಧುರೈ ಪೂರ್ವದಲ್ಲಿ ಇತ್ತೀಚೆಗೆ ನಡೆದ ವಿಜಯ್ ಪಾಲ್ಗೊಂಡ ರಾಜಕೀಯ ಸಮ್ಮೇಳನದಲ್ಲಿ ಸುಮಾರು ನಾಲ್ಕು ಲಕ್ಷ ಜನ ಸೇರಿದ್ದು ತಮಿಳುನಾಡು ರಾಜಕೀಯದಲ್ಲಿ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.











































