ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ

Picture of Savistara

Savistara

Bureau Report

ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ (38) ಬಂಧಿತ ಆರೋಪಿ. ಈತ ಆ.29ರಂದು ರಾತ್ರಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ, ‘ಟರ್ಮಿನಲ್‌ ಬಿಲ್ಡಿಂಗ್‌ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ.ಕರ್ತವ್ಯ ನಿರತ ಟರ್ಮಿನಲ್ ವ್ಯವಸ್ಥಾಪಕರು, ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 351(2), 351(3) 2 19820 ನಾಗರಿಕ ವಿಮಾನಯಾನದ ಸುರಕ್ಷತೆ ವಿರುದ್ಧವಾದ ಅಕ್ರಮ ಚಟುವಟಿಕೆ ತಡೆ ಕಾಯ್ದೆಯ ಸೆಕ್ಷನ್ 3(1)ರ ಅಡಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ವೆಲ್ಲೂರಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ‘ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಸಂಪರ್ಕ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹುಡುಕಿ, ಕರೆ ಮಾಡಿ ಬೆದರಿಕೆ ಹಾಕಿದ್ದೆ. ಅದೇ ತರಹ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಫೋನ್ ಮಾಡಿ ಟರ್ಮಿನಲ್‌ ಬಿಲ್ಡಿಂಗ್‌ ಅನ್ನು ಖಾಲಿ ಮಾಡದೆ ಹೋದರೆ ಅದನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದೆ’ ಎಂದು ಒಪ್ಪಿಕೊಂಡಿದ್ದ.

ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!