ಕುಳೂರು ಅಪಘಾತ ಪ್ರಕರಣ: ಲಾರಿ ಚಾಲಕ ಹಾಗೂ NHAI ವಿರುದ್ಧ ಪ್ರಕರಣ ದಾಖಲು

Picture of Savistara

Savistara

Bureau Report

ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್‌ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಮಂಗಳೂರು, ಸೆ.10: ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್‌ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಪೊಲೀಸ್‌ ವರದಿಗಳ ಪ್ರಕಾರ, ಬೆಳಿಗ್ಗೆ 8:30ರ ಸುಮಾರಿಗೆ ಕೂಳೂರಿನ ರಾಯಲ್ ಓಕ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯಿಂದಾಗಿ ಮಾಧವಿ ಅವರು ಸ್ಕೂಟರ್ ಸಮೇತ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಉಡುಪಿಯಿಂದ ಮಂಗಳೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯ ಚಾಲಕ ಮೊಹಮ್ಮದ್ ಫಾರೂಕ್, ಬಿದ್ದಿದ್ದ ಮಾಧವಿ ಅವರ ಮೇಲೆ ಲಾರಿಯ ಚಕ್ರ ಹರಿಸಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದ ನಿರ್ಲಕ್ಷ್ಯವೂ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ರಸ್ತೆಯ ಗುಂಡಿಗಳನ್ನು ಸರಿಪಡಿಸದೇ ಇದ್ದ NHAI ಅಧಿಕಾರಿಗಳ ನಿರ್ವಹಣೆಯ ಕೊರತೆಯನ್ನು ದೂಷಿಸಲಾಗಿದೆ. ಈ ಸಂಬಂಧ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಹಾಗೂ NHAI ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 224/2025ರಡಿ ಕಲಂ 281, 106(1) 2.2.2 2 198(2) ໖໖ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

[t4b-ticker]
error: Content is protected !!