ಹಾಸನ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

Picture of Savistara

Savistara

Bureau Report

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದ ದುರಂತಕ್ಕೆ ಪ್ರತಿಕ್ರಿಸಿರುವ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆಯನ್ನು “ಹೃದಯ ವಿದ್ರಾವಕ” ಎಂದು ಬಣ್ಣಿಸಿದ್ದಾರೆ.

ಮೋದಿ ಸಂತಾಪ ಸೂಚನೆ

“ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಧಾನಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

PMRF ನಿಂದ ಪರಿಹಾರ

ಪ್ರಧಾನ ಮಂತ್ರಿಗಳು ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಹೆಚ್ಚುವರಿಯಾಗಿ, ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣದ ಸಹಾಯವಾಗಿ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದಿದ್ದಾರೆ.

ಹಾಸನದ ರಾಷ್ಟ್ರೀಯ ಹೆದ್ದಾರಿ-373 ರಲ್ಲಿ ಸೆ.13 ಈ ಘಟನೆ ನಡೆದಿದ್ದು, ಟ್ರಕ್ ಚಾಲಕ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

[t4b-ticker]
error: Content is protected !!