ಮತಪಟ್ಟಿಯಿಂದ ಅನರ್ಹರಿಗೆ ಕೊಕ್: ರಾಜ್ಯ ಚು.ಆಯೋಗ
ಬೆಂಗಳೂರು: ರಾಜ್ಯದಲ್ಲಿ ಮತದಾರ ಪಟ್ಟಿಗಳ ವಿಶೇಷ ಸಮಗ್ರಪರಿಷ್ಕರಣೆ (ಎಸ್ಐಆರ್) ನಡೆಸಲು ಸಿದ್ದತೆಗಳು ನಡೆಯುತ್ತಿದ್ದು, ಸೆ. 23ರೊಳಗೆ ಎಲ್ಲ ತರಬೇತಿ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿವೆ.ಆ ಬಳಿಕ ಕೇಂದ್ರ ಚುನಾವಣ ಆಯೋಗ ಎಸ್ಐಆರ್ನ ಅಧಿಸೂಚನೆ ಹೊರಡಿಸುತ್ತಿದ್ದಂತೆ ಪ್ರಕ್ರಿಯೆಗಳು ಆರಂಭವಾಗಲಿವೆ. ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಮಾಧ್ಯಮ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಸುಕುಮಾರ್ ಅವರು, ಎಸ್ಐಆರ್ ನಡೆಸಲು ನಾವು ಎಲ್ಲ ಸಿದ್ಧತೆಗಳನ್ನು ನಡೆಸಿದ್ದೇವೆ ಎಂದರು.











































