ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಸೇವೆ ದರ ಏರಿಕೆ | ಮುಜರಾಯಿ ಇಲಾಖೆ ನಡೆಗೆ ಭಕ್ತರ ಆಕ್ರೋಶ

Picture of Savistara

Savistara

Bureau Report

ಸುಬ್ರಹ್ಮಣ್ಯ (ಸೆ.20): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿವಿಧ ಸೇವೆಗಳ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕೃತ ದರ ಸೆ.1ರಿಂದಲೇ ಜಾರಿಗೆ ಬಂದಿದೆ. ಸುಮಾರು 40 ಸೇವೆಗಳ ದರ ಹೆಚ್ಚಳಗೊಂಡು ಪರಿಷ್ಕರಣೆ ಆಗಿದೆ. ಈ ಹಿಂದೆ, 2010ರ ನವೆಂಬರ್ ನಲ್ಲಿ ಸೇವೆಗಳ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ 15 ವರ್ಷದ ಬಳಿಕ ಸೇವೆಗಳ ದರ ಪರಿಷ್ಕರಣೆಗೊಂಡಿದೆ.

ಪರಿಷ್ಕರಣೆಗೊಂಡ ಸೇವೆಗಳು

ಚಿಕ್ಕರಥೋತ್ಸವ ಪರಿಷ್ಕೃತ ದರ ರು.12,000, ಚಂದ್ರಮಂಡಲ ಉತ್ಸವ ರು.9,500, ಹೂವಿನ ತೇರಿನ ಉತ್ಸವ ರು.8,700, ರಾಜಾಂಗಣದಲ್ಲಿ ಶೇಷ ವಾಹನಯುಕ್ತ ಭಂಡಿ ಉತ್ಸವ ರು.4,500, ದೀಪಾರಾಧನೆಯುಕ್ತ ಪಾಲಕಿ ಉತ್ಸವ ರು.5,600, ಪಾಲಕಿ ಉತ್ಸವಯುಕ್ತ ಮಹಾಪೂಜೆ ರು.4,000, ಇಡೀ ದಿನದ ಸಪರಿವಾರ ಸೇವೆ ರು.4,050, ಪವಮಾನಯುಕ್ತ ಪಂಚಾಮೃತ ಅಭಿಷೇಕ ರು.160, ಕಲಶ ಪೂಜಾಯುಕ್ತ ಪಂಚಾಮೃತ ಅಭಿಷೇಕ ರು.160, ಪಂಚಾಮೃತಾಭಿಷೇಕ ರು.100, ರುದ್ರಾಭಿಷೇಕ ರು.100, ಶೇಷ ಸೇವೆ (ಅಷ್ಟೋತ್ತರ ಸಹಿತ) ರು.160, ಹರಿವಾಣ ನೈವೇದ್ಯ ರು.125.

ಕಾರ್ತಿಕ ಪೂಜೆ ರು.100, ಚಿತ್ರಾನ್ನ ಸಮರ್ಪಣೆ ರು.200, ಹಾಲು ಪಾಯಸ ರು.160, ಸಹಸ್ರನಾಮಾರ್ಚನೆ ರು.25, ಮೃಷ್ಟಾನ್ನ ಸಮರ್ಪಣೆ ರು.925, ರಾತ್ರಿ ಮಹಾಪೂಜೆಯುಕ್ತ ಪಾಲಕಿ ಉತ್ಸವ ರು.4,600, ಹರಕೆಗಳಾದ ನಾಗಪ್ರತಿಷ್ಠೆ ರು.500, ನಾಮಕರಣ ರು.250, ಅಶ್ಲೇಷ ಬಲಿ ರು.500, ಆಶ್ಲೇಷ ಬಲಿ ಉದ್ಯಾಪನೆ ರು.500, ಷಷ್ಠಿವೃತ ಉದ್ಯಾಪನೆ ರು.500, ಮಂಗಳ ಕಾರ್ಯಗಳಾದ ಉಪನಯನ (ಬ್ರಹ್ಮಪ್ರತಿಷ್ಠೆ) ರು.800, ಸತ್ಯನಾರಾಯಣ ಪೂಜೆ ರು.1000, ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಏಕದಶಾವಾರ. ರುದ್ರಾಭಿಷೇಕ ರು.120, ಪಂಚಾಮೃತಾಭಿಷೇಕ ರು.100, ಹರಿವಾಣ ನೈವೇದ್ಯ ರು.150.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!