ಹೊಸಪೇಟೆ (ವಿಜಯನಗರ): ರಾಜ್ಯದ ಎಲ್ಲೆಡೆಯಂತೆ ಜಿಲ್ಲೆಯಲ್ಲೂಸಾಮಾಜಿಕ, ಆರ್ಥಿಕ ಸಮೀಕ್ಷೆ ಸೋಮವಾರ ಆರಂಭಗೊಂಡಿದ್ದು, ನಾನು ನಾಸ್ತಿಕ ಎಂದು ಬರೆಸುವೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ದೇವರು- ದಿಂಡಿರು, ಸ್ವರ್ಗ-ನರಕ- ಆ ಲೋಕ, ಈ ಲೋಕ, ಆ ಜನ್ಮ, ಈ ಜನ್ಮ, ಈ ವೈಗೈರೆಗಳಲ್ಲಿ ನಂಬಿಕೆ ಇರದವನು ನಾನು ಎಂದು ಹೇಳಿದ್ದಾರೆ.ಕುಂ.ವೀ ಅವರು ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನೆಲೆಸಿದ್ದಾರೆ.











































