ಲೇಹ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಬಿಜೆಪಿ ಕಚೇರಿ, ಪೊಲೀಸ್ ವಾಹನಕ್ಕೆ ಬೆಂಕಿ

Picture of Savistara

Savistara

Bureau Report

ಲೇಹ್: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜನ ಹಿಂಸಾಚಾರಕ್ಕೆ ಇಳಿದ ಪರಿಣಾಮ ಘಟನಾ ಸ್ಥಳದಲ್ಲಿ ಪರಿಸ್ಥಿತಿ ಭುಗಿಲೆದ್ದಿದೆ. ಪ್ರತಿಭಟನಾಕಾರರು ಲೇಹ್‌ನ ಬಿಜೆಪಿ ಕಚೇರಿಗೆ ಹಾಗೂ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಲ್ಲದೇ ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಚಕಮಕಿ ನಡೆದಿದೆ. ಕಳೆದ ಕೆಲ ವಾರಗಳಿಂದಲೂ ಇಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೆ ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸ್ ವಾಹನಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಹಾಗೂ 6ನೇ ಶೆಡ್ಯೂಲ್ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಕಳೆದ 14 ದಿನಗಳಿಂದ ಇಲ್ಲಿ ಪರಿಸರವಾದಿ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರಿಗೆ ಬೆಂಬಲ ವ್ಯಕ್ತಪಡಿಸಿ ಲೇಹ್ ಅಪೆಕ್ಸ್ ಬಾಡಿ (LAB)ಸಂಘಟನೆಯ ಯುವ ವಿಭಾಗವು ಈ ಪ್ರತಿಭಟನೆಗೆ ಕರೆ ನೀಡಿತು.

[t4b-ticker]
error: Content is protected !!