ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ರವರನ್ನು ಇಂದು ( ಅ.3) ದೆಹಲಿಯಲ್ಲಿ ಭೇಟಿಯಾಗಿ ಫೆಬ್ರವರಿಯಲ್ಲಿ ನಡೆಯಲಿರುವ ‘TiECon Mangalore’ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಐಟಿ ಉದ್ಯಮಿಗಳ ಸಹಕಾರ ಮತ್ತು ಸರ್ಕಾರದ ಬೆಂಬಲದೊಂದಿಗೆ #SiliconBeach ಕಾರ್ಯಕ್ರಮವು ಹೇಗೆ ವೇಗವನ್ನು ಪಡೆಯುತ್ತಿದೆ ಎಂಬುದರ ಕುರಿತು ಈ ಸಂದರ್ಭದಲ್ಲಿ ಚರ್ಚಿಸಿದರು.ಕೇಬಲ್ ಲ್ಯಾಂಡಿಂಗ್ ಸ್ಟೇಷನ್ನ ಬಗ್ಗೆ ಚರ್ಚೆ ನಡೆಸಿ ಭಾರತ AI ಮಿಷನ್ ಅಡಿಯಲ್ಲಿ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ AI ಡೇಟಾ ಮತ್ತು ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿದರು.











































