ಬೆಂಗಳೂರು: ಯಶಸ್ವಿನಿ ಯೋಜನೆಯ ಫಲಾನುಭವಿಗಳನ್ನು ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ (ಎಬಿಎಆರ್ಕೆ) ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಹಕಾರ ಇಲಾಖೆಯಿಂದ ಯಶಸ್ವಿನಿ ಹಾಗೂ ಆರೋಗ್ಯ ಇಲಾಖೆಯಿಂದ ಎಬಿಎಆರ್ ಕೆ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ಪೈಕಿ ಹೆಚ್ಚಿನ ಕುಟುಂಬಗಳು ಎರಡೂ ಯೋಜನೆಯ ಫಲಾನುಭವಿಗಳಾಗಿದ್ದಾರೆ.ಎರಡೂ ಯೋಜನೆಗಳು ಪ್ರತಿ ಕುಟುಂಬಕ್ಕೆವಾರ್ಷಿಕ ತಲಾ 5 ಲಕ್ಷದವರೆಗೆ ಆರೋಗ್ಯಸೇವಾ ಸೌಲಭ್ಯ ಒದಗಿಸುತ್ತದೆ. ಆದ್ದರಿಂದಫಲಾನುಭವಿಗಳು ಯಾವುದಾದರೂಒಂದು ಯೋಜನೆಯಡಿ ಪ್ರಯೋಜನಪಡೆಯಬೇಕು ಎಂದು ತಿಳಿಸಲಾಗಿದೆ.ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(ಸಾಸ್ಟ್) ಎರಡೂ ಯೋಜನೆಗಳನ್ನು
ನಿರ್ವಹಣೆ ಮಾಡುತ್ತಿದೆ. ರಾಜ್ಯದಲ್ಲಿ41.51ಲಕ್ಷ ಮಂದಿ ಯಶಸ್ವಿನಿಫಲಾನುಭವಿಗಳಾಗಿದ್ದು, 41.09 ಲಕ್ಷಮಂದಿ ಆಧಾರ್ ಹೊಂದಿದ್ದಾರೆ. ಇವರಲ್ಲಿ35.71 ಲಕ್ಷ ಮಂದಿ ಎರಡೂ ಯೋಜನೆಗಳಫಲಾನುಭವಿಗಳಾಗಿದ್ದಾರೆ. ಕಳೆದ ವರ್ಷದಲ್ಲಿ3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆಎಬಿಎಆರ್ಕೆ ಅಡಿಯಲ್ಲಿ 13.22ಕೋಟಿ ಮೊತ್ತದ ಚಿಕಿತ್ಸೆ ಪಡೆದಿದ್ದಾರೆ.














































