ಬೆಂಗಳೂರು (ಅ.12): ಆರ್ಎಸ್ಎಸ್ನ (RSS) ಶತಮಾನೋತ್ಸವ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿವಿಧೆಡೆ ಇಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ಪಥ ಸಂಚಲನ ಕಾರ್ಯಕ್ರಮ ನಡೆಸಿದ್ರು. ಆದ್ರೆ ಇದೀಗ RSSಗೆ ಶಾಕ್ ಕೊಡಲು ಸಚಿವ ಪ್ರಿಯಾಂಕಾ ಖರ್ಗೆ (Priyank Kharge) ಮುಂದಾಗಿದ್ದಾರೆ. ಆರ್ಎಸ್ಎಸ್ ಚಟುವಟಿಗಳ ಮೇಲೆ ನಿಷೇಧ ಹೇರುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ.
RSS ಚಟುವಟಿಕೆ ನಿಷೇಧಕ್ಕೆ ಪತ್ರಶಾಲಾ-ಕಾಲೇಜು ಮೈದಾನಗಳಲ್ಲಿ ನಡೆಯುವ ಆರ್ಎಸ್ಎಸ್ ಚಟುವಟಿಕೆಗಳ ಮೇಲೆ ನಿಷೇಧ ಹೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಸಮಾಜದಲ್ಲಿ RSS ಏಕತೆ ಹಾಗೂ ಸಂವಿಧಾನದ ವಿರುದ್ಧ ನಕಾರಾತ್ಮಕ ಭಾವನೆ ತುಂಬುತ್ತಿದೆ ಎಂದಿದ್ದಾರೆ.ಮಕ್ಕಳ ಮನಸ್ಸಿನ ಮೇಲೆ ಪರಿಣಾಮಪೊಲೀಸ್ ಅನುಮತಿ ಪಡೆಯದೇ ದೊಣ್ಣೆ ಹಿಡಿದು ಆಕ್ರಮಣವಾಗಿ ಪ್ರದರ್ಶನ ಮಾಡುತ್ತಾರೆ. ಇದ್ರಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಿಯಾಂಕ ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.
ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಿಆರ್ಎಸ್ಎಸ್ನ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಿ. ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಆರ್ ಎಸ್ ಎಸ್ ಸಂಘಟನೆಯ ಶಾಖೆ, ಸಾಂಘಿಕ ಅಥವಾ ಬೈಠೆಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದು, ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ್ತೊಂದು ವಾಗ್ಯುದ್ದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.














































