ಸುಳ್ಯ ತಾಲೂಕಿನ ಕುಂಡಡ್ಕದಲ್ಲಿ ಸಿಡಿಲಿನ ಆಘಾತ | ಮೂವರಿಗೆ ಗಾಯ : ಆಸ್ಪತ್ರೆಗೆ ದಾಖಲು

Picture of Savistara

Savistara

Bureau Report

ಕುಂಡಡ್ಕ : ಪೆರುವಾಜೆ ಗ್ರಾಮದ ಕುಂಡಡ್ಕ ಸಾರಕರೆ ಬಳಿ ಶುಕ್ರವಾರ ರಾತ್ರಿ ಸಿಡಿಲು ಬಡಿದು ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಸಾರಕರೆ ನಿವಾಸಿ ಭಾರತಿ, ಪುತ್ರಿಯರಾದ ಸುಶ್ಮಿತಾ, ಲತಾಶ್ರೀ ಅವರು ಗಾಯಗೊಂಡವರು. ರಾತ್ರಿ‌ 7.30 ಗಂಟೆ ಹೊತ್ತಿಗೆ ಭಾರೀ ಸಿಡಿಲಿನ‌ ಸದ್ದು ಕೇಳಿ ಬಂದಿದ್ದು ಈ ವೇಳೆ ಮನೆ ಒಳಗಿನ ಅಡುಗೆ ಕೋಣೆಯಲ್ಲಿ ಇದ್ದ ಮೂವರಿಗೆ ಸಿಡಿಲಿನ ಅಘಾತ ಉಂಟಾಗಿದೆ. ತತ್ ಕ್ಷಣ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಇಬ್ಬರಿಗೆ ಹೆಚ್ಚಿನ ಗಾಯ ಉಂಟಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!