ಯಾವುದೇ ಸಂಘ-ಸಂಸ್ಥೆ ನಿಷೇಧಿಸುವ ಚಿಂತನೆ ಇಲ್ಲ: ಎಚ್‌.ಕೆ.ಪಾಟೀಲ

Picture of Savistara

Savistara

Bureau Report

ಬೆಳಗಾವಿ: ‘ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಸೇರಿದಂತೆ ಯಾವುದೇ ಸಂಘ-ಸಂಸ್ಥೆ ಮತ್ತು ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾವ ಮತ್ತು ಚಿಂತನೆ ಸರ್ಕಾರದ ಮುಂದೆ ಇಲ್ಲ’ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

‘ರಾಜ್ಯದಲ್ಲಿ ಆ‌ರ್ ಎಸ್ ಎಸ್ ನಿಷೇಧಿಸಲಾಗುತ್ತದೆಯೇ’ ಎಂಬ ಸುದ್ದಿಗಾರರ ಪ್ರಶ್ನೆಗೆ, ಇಲ್ಲಿ ಶನಿವಾರ ಅವರು ಹೀಗೆ ಪ್ರತಿಕ್ರಿಯಿಸಿದರು.’ಬೆಳಗಾವಿಯಲ್ಲಿ ಈ ಬಾರಿಯೂ ಬದ್ಧತೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸುತ್ತೇವೆ. ಅದಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ’ ಎಂದರು.’ಬೆಳಗಾವಿಯಲ್ಲಿ ವಾಸಿಸುವ ಎಲ್ಲ ಭಾಷಿಕರೂ ನ.1ರಂದು ವೈಭವದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸುವವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದರು

[t4b-ticker]
error: Content is protected !!