ಅಶೋಕ್ ರೈ ಜನಮನ ಕಾರ್ಯಕ್ರಮ | ನೂಕು ನುಗ್ಗಲು ಹತ್ತಕ್ಕೂ ಮಂದಿ ಅಸ್ವಸ್ಥ

Picture of Savistara

Savistara

Bureau Report

ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ.

ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು ಸಿಗದೆ ಜನರ ಪರದಾಡಿದ್ದಾರೆ. ಮಹಿಳೆಯರು ಸಣ್ಣ ಮಕ್ಕಳು ಕಾರ್ಯಕ್ರಮಕ್ಕೆ ಬಂದಿದ್ದ ಹಿನ್ನೆಲೆ ನೂಕು ನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕ್ರಮವಾಗಿದ್ದು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದರು ಅಶೋಕ ಜನಮನ ಕಾರ್ಯಕ್ರಮದಲ್ಲಿ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದ ಕಾಲ್ತುಳಿತ ಉಂಟಾಗಿದ್ದು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಸೇರಿ ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

[t4b-ticker]
error: Content is protected !!