ಇಂದಿನಿಂದ(ಅ.22) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊರಾಂಗಣ ಉತ್ಸವಾದಿಗಳು ಆರಂಭ

Picture of Savistara

Savistara

Bureau Report

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ(ಅ.22 ಬುಧವಾರ) ದೀಪಾವಳಿ ಬಲಿಪಾಡ್ಯಮಿ ದಿನದಂದು ಶ್ರೀ ದೇವರು ಹೊರಾಂಗಣ ಪ್ರವೇಶಿಸಲಿದ್ದಾರೆ. ಆ ಮೂಲಕ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾಗಲಿದೆ. ಇಂದು ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವಳದಲ್ಲಿ ಗಜಪೂಜೆ ನೆರವೇರಲಿದೆ. ಸಂಜೆ ಗೋದೋಳಿ ಲಗ್ನದಲ್ಲಿ ಗೋಪೂಜೆ ನಡೆಯಲಿರುವುದು. ರಾತ್ರಿ ಮಹಾಪೂಜೆ ನಂತರ ಹೊರಾಂಗಣದಲ್ಲಿ ಬಂಡಿ ಉತ್ಸವ ಹಾಗೂ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆಯಲಿರುವುದು.

[t4b-ticker]
error: Content is protected !!