ತುಳಸಿ ಗಿಡವನ್ನು ಮನೆಯ ಈ ದಿಕ್ಕಿನಲ್ಲಿಟ್ಟು ಪೂಜಿಸಿದರೆ ಒಳಿತಾಗುತ್ತದೆ

Picture of Savistara

Savistara

Bureau Report

ತುಳಸಿ ಗಿಡಕ್ಕೆ ಪೂಜೆ ಸಲ್ಲಿಸುವುದರಿಂದ ಇಷ್ಟಾರ್ಥಗಳು ಪ್ರಾಪ್ತಿಯಾಗುತ್ತವೆ ಎಂಬ ನಂಬಿಕೆ ಇದೆ. ತುಳಸಿ ಗಿಡ ಮನೆಯಲ್ಲಿದ್ದರೆ ವಾಸ್ತುದೋಷ ಹಾಗೂ ದುಷ್ಟಶಕ್ತಿಗಳಿಂದ ಪರಿಹಾರ ದೊರೆಯುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ಮನೆಯ ಯಾವ ದಿಕ್ಕಿನಲ್ಲಿ ತುಳಸಿ ಗಿಡ ಇದ್ದರೆ ಶುಭ ಫಲ ಎಂಬುದನ್ನು ತಿಳಿಯೋಣ.

  • ತುಳಸಿ ಗಿಡವನ್ನು ನೈಋತ್ಯ ಅಥವಾ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ, ಮನೆಯಲ್ಲಿನ ಎಲ್ಲಾ ಕಾರ್ಯಗಳು ಅಡ್ಡಿಯಿಲ್ಲದೆ ಸರಾಗವಾಗಿ ನಡೆಯುತ್ತವೆ ಎಂದು ಹೇಳಲಾಗುತ್ತದೆ.
  • ತುಳಸಿ ಗಿಡ ಈಶಾನ್ಯ ಭಾಗದಲ್ಲಿ ಇದ್ದರೆ ಮನೆಯಲ್ಲಿ ಹಲವು ಸಮಸ್ಯೆಗಳು ಹಾಗೂ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ನೈರುತ್ಯ ಅಥವಾ ದಕ್ಷಿಣ ದಿಕ್ಕಿನಲ್ಲಿ ತುಳಸಿ ಗಿಡವಿರುವುದು ಶ್ರೇಷ್ಠವೆಂದು ಪರಿಗಣಿಸಲಾಗಿದೆ.
  • ತುಳಸಿ ಗಿಡವನ್ನು ಒಣಗದಂತೆ ಆರೈಕೆ ಮಾಡಿ. ಇದು ನಿಮ್ಮ ಕುಟುಂಬವನ್ನು ದೃಷ್ಟ ಶಕ್ತಿಯಿಂದ ರಕ್ಷಿಸುತ್ತದೆ ಎಂಬ ನಂಬಿಕೆ ಇದೆ.
  • ತುಳಸಿಗೆ ಪ್ರತಿದಿನ ಗೋಧೂಳಿ ಸಮಯದಲ್ಲಿ ಪೂಜೆ ಸಲ್ಲಿಸಿ ಈ ಮಂತ್ರವನ್ನು ಪಠಿಸಿ: ‘ಯನ್ನೂಲೇ ಸರ್ವ ತೀರ್ಥಾನಿ ಯನ್ಮಧ್ಯೆ ಸರ್ವದೇವತಾಃ ಯದಗ್ರೇ ಸರ್ವವೇದಾಶ್ಚ ತುಳಸಿ ತ್ವಾಂ ನಮಾಮ್ಯಹಂ’
  • ಪೂಜೆಯಲ್ಲಿ ಈ ಮಂತ್ರವನ್ನು ಪಠಿಸುವುದರಿಂದ ಕಷ್ಟಗಳು ಪರಿಹಾರವಾಗಿ ಲಕ್ಷ್ಮೀನಾರಾಯಣನ ಆಶೀರ್ವಾದ ಲಭಿಸುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.
News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!