ನ.15 ರಂದು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ… ಆದೇಶವನ್ನು ತಿರುಚಲಾಗಿದೆ: ಇಲಾಖೆ

Picture of Savistara

Savistara

Bureau Report

ಸಾಲುಮರದ ತಿಮ್ಮಕ್ಕ ನಿಧನ ಹಿನ್ನೆಲೆ ರಜೆ ಎಂದು ಸುಳ್ಳು ಸುದ್ದಿ ವೈರಲ್

ಮಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ನ. 14 ರಂದು ನಿಧನ ಹೊಂದಿದ್ದು, ನ.15ರಂದು ಶಾಲಾ-ಕಾಲೇಜುಗಳಿಗೆ ಸರಕಾರಿ ರಜೆ ಇರುವುದಿಲ್ಲ.ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಶಾಲಾ-ಕಾಲೇಜುಗಳಿಗೆ, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬುವುದಾಗಿ ನ. 14ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿತ್ತು. ಆ ಆದೇಶದ ಕೆಳಗೆ ಸಹಿ ಮಾಡಿದ ಅಧಿಕಾರಿಯು ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕೇವಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಇರುತ್ತದೆ ಎಂಬುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟನೆ ತಿಳಿಸಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!