ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಲಾಠಿ ಬೇಡ: ಭೀಮ್ ಆರ್ಮಿ ಆಗ್ರಹ

Picture of Savistara

Savistara

Bureau Report

ಬೆಂಗಳೂರು: ‘ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ಪಥಸಂಚಲನದಲ್ಲಿ ಲಾಠಿ, ದೊಣ್ಣೆ ಬಳಸಲು ಸರ್ಕಾರ ಅನುಮತಿ ನೀಡಬಾರದು’ ಎಂದು ಭೀಮ್ ಆರ್ಮಿ ಆಗ್ರಹಿಸಿದೆ.

ಭೀಮ್ ಆರ್ಮಿ ಅಧ್ಯಕ್ಷ ರಾಜ್ ಗೋಪಾಲ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಪಥ ಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ಗೊತ್ತಾಗಿದೆ. ಪ್ರಜಾಪ್ರಭುತ್ವದ ಹಕ್ಕಿನಡಿ ಪಥಸಂಚಲನ ಮಾಡಬಹುದು. ಬಿಎನ್‌ಎಸ್‌ಎಸ್-2023 ಸೆಕ್ಷನ್ 163ರಡಿ ಶಸ್ತ್ರ ವ್ಯತಿರಿಕ್ತ ಆಯುಧಗಳನ್ನು ಹಿಡಿದು ಮೆರವಣಿಗೆ ಮಾಡುವುದು ಕಾನೂನು ಬಾಹಿರ. ಆಯುಧಗಳು ಜನರಲ್ಲಿ ಭಯ ಹುಟ್ಟಿಸುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುತ್ತದೆ’ ಎಂದು ತಿಳಿಸಿದರು.’ಒಂದು ವೇಳೆ ಲಾಠಿ ಹಿಡಿದು ಪಥ ಸಂಚಲನ ನಡೆಸಿದರೆ ಭೀಮ್ ಆರ್ಮಿ ಕಾನೂನು ಹೋರಾಟ ಮಾಡಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.ಈ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!