ಸಮಾಜದ ದಾರಿ ತಪ್ಪಿಸುತ್ತಿರುವ ಕಾವಿಧಾರಿಗಳು: ವಿಜಯಾನಂದ ಕಾಶಪ್ಪನವ‌ರ್

Picture of Savistara

Savistara

Bureau Report

ಬೆಂಗಳೂರು: ‘ಕೆಲವು ಕಾವಿಧಾರಿಗಳು ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗುರುಗಳು ದೇವರಲ್ಲ, ಅವರೂ ನಮ್ಮಂತೆ ಮನುಷ್ಯರು’ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಎಸ್. ಕಾಶಪ್ಪನವ‌ರ್ ಅಭಿಪ್ರಾಯಪಟ್ಟರು.

ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸುವಂತೆ ವೀರಶೈವ, ಲಿಂಗಾಯತ ಧರ್ಮದ ಕೆಲ ಸ್ವಾಮೀಜಿಗಳು ಕರೆ ಕೊಟ್ಟಿದ್ದರು. ಸ್ವಾಮೀಜಿಗಳನ್ನು ಸೃಷ್ಟಿಸಿರುವುದೇ ಭಕ್ತರು. ಆ ಭಕ್ತರು ಹೇಳಿದಂತೆ ಸ್ವಾಮೀಜಿಗಳು ಕೇಳಬೇಕು. ಆದರೆ, ಕೆಲ ಸ್ವಾಮೀಜಿಗಳು ದಾರಿತಪ್ಪಿಸುತ್ತಿದ್ದಾರೆ. ಅವರಿಗೆ ತಮ್ಮ ನಡವಳಿಕೆ ಬಗ್ಗೆ ಅರಿವಿರಬೇಕು’ ಎಂದು ಹೇಳಿದರು.’ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಾರಂಭವಾದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹ 100 ಕೋಟಿ ಅನುದಾನ ನೀಡಿದ್ದರು. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದಾಗ, ನಿಗಮಕ್ಕೆ ₹ 300 ಕೋಟಿ ಅನುದಾನ ನೀಡಿದ್ದಾರೆ. ಈ ಹಣವನ್ನು ಸಮರ್ಪಕವಾಗಿ ಸಮುದಾಯದ ಯೋಜನೆಗಳಿಗೆ ಬಳಕೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶರಣಬಸಪ್ಪ ಸೇರಿವೆ.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!