ಉತ್ತರ ಪ್ರದೇಶ: ಮದರಸಾಗಳ ಮಾಹಿತಿ ಸಂಗ್ರಹ

Picture of Savistara

Savistara

Bureau Report

ಲಖನೌ: ದೆಹಲಿ ಸ್ಪೋಟದ ಬೆನ್ನಲ್ಲೇ, ಉತ್ತರ ಪ್ರದೇಶದಭಯೋತ್ಪಾದಕ ನಿಗ್ರಹ ದಳವು (ಎಟಿಎಸ್) ರಾಜ್ಯದ ಎಂಟು ಜಿಲ್ಲೆಗಳ ಮದರಸಾಗಳ ಸಿಬ್ಬಂದಿ, ಶಿಕ್ಷಕರು ಮತ್ತು ಅಲ್ಲಿನ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗ್‌ರಾಜ್, ಪ್ರತಾಪ್‌ಗಢ, ಕೌಶಾಂಭಿ, ಫತೇಪುರ, ಬಾಂದಾ, ಹಮೀರ್‌ಪು‌ರ್, ಚಿತ್ರಕೂಟ ಮತ್ತು ಮಹೊಬಾ ಜಿಲ್ಲೆಗಳ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಪತ್ರ ಬರೆದಿರುವ ಎಟಿಎಸ್, ಆದಷ್ಟು ಬೇಗ ತಮ್ಮ ವ್ಯಾಪ್ತಿಯ ಮದರಸಾಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದೆ. ಮದರಸಾಗಳ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ವಿಳಾಸ, ಮೊಬೈಲ್‌ ಸಂಖ್ಯೆ, ಪೋಷಕರ ಹೆಸರು ಮತ್ತಿತರ ವಿವರಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ.’ಎಟಿಎಸ್‌ ಕೋರಿರುವ ಮಾಹಿತಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 206 ಮದರಸಾಗಳಿವೆ ಎಂದು ಅಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ಕೃಷ್ಣ ಮುರಾರಿ ಸುದ್ದಿಗಾರರಿಗೆ ತಿಳಿಸಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!