ಪೊಲೀಸ್‌ ಕುಟುಂಬದ ಮಕ್ಕಳಿಗೂ ಸಿಇಟಿಯಲ್ಲಿ ಅವಕಾಶ: ಜಿ.ಪರಮೇಶ್ವರ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಇದುವರೆಗೂ 180 ಜನ ಮೀಸಲಾತಿ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ‘ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025’ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.’ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 ಜನ ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ನೇಮಕಾತಿ ಆಗಿದ್ದಾರೆ. ಅದೇ ರೀತಿ, ಪೊಲೀಸ್ ಕುಟುಂಬದಿಂದ ಬಂದ ಮಕ್ಕಳಿಗೆ ಸಿ.ಇ.ಟಿಯಲ್ಲೂ ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.`ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ನಮ್ಮನ್ನು ಹೆಚ್ಚು ಸದೃಢಗೊಳಿಸುತ್ತದೆ. ಜೀವನದ ಅನೇಕ ಸಂದರ್ಭಗಳಲ್ಲಿ ಸೋಲು-ಗೆಲುವುಗಳ ಅನುಭವಗಳು ಎದುರಾಗುತ್ತವೆ. ಸೋತಾಗ ನಿರಾಶೆ ಆಗುತ್ತದೆ. ಕ್ರೀಡೆಗಳು ಆತ್ಮಸ್ಥೆರ್ಯ ಹೆಚ್ಚಿಸುತ್ತದೆ’ ಎಂದು ಹೇಳಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಹಾಜರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!