ಧರ್ಮಸ್ಥಳ ಬುರುಡೆ ಪ್ರಕರಣ: ಎಸ್‌ಐಟಿಯಿಂದ 3,900 ಪುಟಗಳ ತನಿಖಾ ವರದಿ ಸಲ್ಲಿಕೆ

Picture of Savistara

Savistara

Bureau Report

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿರುವ ಬಹುಹತ್ಯೆ, ಅತ್ಯಾಚಾರ ಮತ್ತು ರಹಸ್ಯ ಸಮಾಧಿ ಆರೋಪಗಳ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಗುರುವಾರ ಜಿಲ್ಲೆಯ ಬೆಳ್ತಂಗಡಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸುಮಾರು 3,900 ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದೆ.

ಆರೋಪಿ ಪಟ್ಟಿಯಲ್ಲಿ -ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟನ್ನಾವರ, ಟಿ. ಜಯಂತ್,ವಿಟ್ಟಲ್ ಗೌಡ – ಮೊದಲು FIR ದಾಖಲಿಸಲು ಬೆಂಬಲಿಸಿದ್ದ ಹೋರಾಟಗಾರರು, ಹಾಗೂ ಸುಜಾತಾ ಭಟ್, ಮತ್ತೊಬ್ಬ ವ್ಯಕ್ತಿ (ವರದಿ ಪ್ರಕಾರ ದೂರುದಾರ ಚಿನ್ನಯ್ಯ)ಇವರನ್ನು ಸೇರಿಸಲಾಗಿದೆ.ಎಸ್‌ಐಟಿ ತನಿಖೆಯ ಮಹತ್ಪರ್ಣ ಹಂತವಾದ ಈ ವರದಿ ಸಲ್ಲಿಕೆಯ ನಂತರ, ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!