ನಾನು ಬೌದ್ಧಧರ್ಮ ಪಾಲಿಸುತ್ತೇನೆ, ನಾನೊಬ್ಬ ಜಾತ್ಯತೀತವಾದಿ: ಸಿಜೆಐ ಗವಾಯಿ ವಿದಾಯ ಭಾಷಣ

Picture of Savistara

Savistara

Bureau Report

ನವದೆಹಲಿ: ನಾನೊಬ್ಬ ಜಾತ್ಯತೀತವಾದಿ, ಬೌದ್ಧಧರ್ಮವನ್ನು ಅನುಸರಿಸುತ್ತೇನೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ತಿಳಿಸಿದ್ದಾರೆ.ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ಸ್ ಅಸೋಸಿಯೇಷನ್ ​​(SCAORA)ನಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ನವೆಂಬರ್ 20ರ ತಮ್ಮ ಕೊನೆಯ ಕೆಲಸದ ದಿನಕ್ಕೂ ಮುನ್ನ ಸಿಜೆಐ ಗವಾಯಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಸಿಜೆಐ ಗವಾಯಿ ಅವರು ಅಧಿಕೃತವಾಗಿ ನವೆಂಬರ್ 23 ರಂದು ನಿವೃತ್ತಿ ಹೊಂದಲಿದ್ದಾರೆ.ವಿದಾಯ ಭಾಷಣದಲ್ಲಿ ಮಾತನಾಡಿದ ಅವರು, ನಾನು ಬೌದ್ಧಧರ್ಮವನ್ನು ತಮ್ಮ ಪಾಲಿಸುತ್ತಿದ್ದರೂ, ಹಿಂದೂ ಧರ್ಮ, ಸಿಖ್ ಧರ್ಮ, ಇಸ್ಲಾಂ ಮತ್ತು ಇತರ ಧರ್ಮಗಳನ್ನು ಒಳಗೊಂಡಂತೆ ಪ್ರತಿಯೊಂದು ಧರ್ಮವನ್ನು ನಂಬುವ ನಿಜವಾದ ಜಾತ್ಯತೀತ ವ್ಯಕ್ತಿ ಎಂದು ಹೇಳಿಕೊಂಡಿದ್ದಾರೆ.ನನ್ನ ತಂದೆಯಿಂದ ಜಾತ್ಯತೀತನಾಗಿರುವುದನ್ನು ಕಲಿತಿದ್ದೇನೆ. ಅವರು ನಿಜವಾದ ಜಾತ್ಯತೀತರೂ ಮತ್ತು ಡಾ. ಭೀಮರಾವ್ ಅಂಬೇಡ್ಕರ್ ಅವರ ಪಾಂಡಿತ್ಯಪೂರ್ಣ ಅನುಯಾಯಿಯೂ ಆಗಿದ್ದರು ಎಂದು ಹೇಳಿದ್ದಾರೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!