ಬಿಜೆಪಿ | ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ; ಬಸನಗೌಡ ಪಾಟೀಲ ಯತ್ನಾಳ

Picture of Savistara

Savistara

Bureau Report

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

‘ವಿಜಯೇಂದ್ರ ಬಿಜೆಪಿ ಚುಕ್ಕಾಣಿ ಹಿಡಿದ ಬಳಿಕ ಪಕ್ಷ ದುರ್ಬಲವಾಗಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡಿದೆ. ಹೀಗಾಗಿ, ವಿಜಯೇಂದ್ರ ಬದಲಾವಣೆಗೆ ನಾಯಕರು ಪಟ್ಟು ಹಿಡಿದ್ದಾರೆ’ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.’ವಿಜಯೇಂದ್ರ ನಾಲ್ಕಾರು ಬೆಂಬಲಿಗರನ್ನು ಜೊತೆಯಲ್ಲಿಟ್ಟುಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಹಿಂಬಾಲಕರನ್ನು ಮಾತ್ರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇಂತಹ ಕಾರ್ಯಗಳು ಪಕ್ಷನಿಷ್ಠರಲ್ಲಿ ಬೇಸರ ಮೂಡಿಸಿವೆ’ ಎಂದರು.’ಕಾರಿನ ಡಿಕ್ಕಿಯಲ್ಲಿ ಶಾಲು, ಹಾರ ಇಟ್ಟುಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಬೆಂಬಲಿಗರನ್ನು ಮುಂದೆಬಿಟ್ಟು ಜೈಕಾರ ಹಾಕಿಸಿಕೊಳ್ಳುತ್ತಾರೆ. ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎದ್ದಿದೆ. ಬಿಜೆಪಿಗೆ ಪರ್ಯಾಯವಾಗಿ ಹೊಸ ಪಕ್ಷ ಕಟ್ಟಿದರೆ ನಿರೀಕ್ಷೆಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದು ಮುಖ್ಯಮಂತ್ರಿಯಾದರೆ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎನ್ನಲಾಗುತ್ತಿದೆ. ಒಂದು ವೇಳೆ ಇದು ನಿಜವಾದರೆ ಕರ್ನಾಟಕದ ನೈಸರ್ಗಿಕ ಸಂಪತ್ತು ಉಳಿಯುವುದಿಲ್ಲ. ಉಸಿರಾಡುವ ಗಾಳಿಗೂ ತೆರಿಗೆ ಕಟ್ಟಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಆರೋಪಿಸಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!