ಶೃಂಗೇರಿಯ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ರಾಷ್ಟ್ರಪತಿಗಳನ್ನು ಆಶೀರ್ವದಿಸಿದರು.
ಹಿಂದೆ ಜಗದ್ಗುರು ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರು ರಾಷ್ಟ್ರಪತಿ ಡಾ.ರಾಧಾಕೃಷ್ಣನ್ ಅವರ ಆಹ್ವಾನದ ಮೇರೆಗೆ ಮತ್ತು ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ರಾಷ್ಟ್ರಪತಿ ಡಾ.ಶಂಕರದಯಾಳ್ ಶರ್ಮ ಅವರ ಆಹ್ವಾನದ ಮೇರೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು.










































