ದಾವಣಗೆರೆ: ಪೋಕೊ ಮೊದಲ ಪ್ರಕರಣದಲ್ಲಿಆರೋಪಮುಕ್ತರಾಗಿ ಚಿತ್ರದುರ್ಗದಿಂದ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರಕ್ಕೆ ಶಿವಮೂರ್ತಿ ಮುರುಘಾ ಶರಣರು ಆಗಮಿಸಿದರು.
ಬಳಿಕ ಶಿವಯೋಗಿ ಮಂದಿರದ ಆವರಣದಲ್ಲಿರುವ ಅಥಣಿ ಶಿವಯೋಗಿ ಸ್ವಾಮೀಜಿ ಹಾಗೂ ಜಯದೇವ ಸ್ವಾಮೀಜಿ ಅವರ ಗದ್ದುಗೆಗೆ ಪುಷ್ಪನಮನ ಸಲ್ಲಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಇನ್ನೂ ಒಂದಷ್ಟು ದಿನ ಮೌನ ಕಾಪಾಡಿಕೊಳ್ಳಬೇಕಿದೆ. ಮಾತನಾಡುವ ಸಂದರ್ಭಕಡಿಮೆ ಇದೆ. ಅಧಿಕೃತವಾಗಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ಹಂಚಿಕೊಳ್ಳುವೆ’ ಎಂದು ಹೇಳಿದರು. ಸುದ್ದಿಗಾರರ ಎಲ್ಲಾ ಪ್ರಶ್ನೆಗಳಿಗೂ ‘ನೋ ಕಾಮೆಂಟ್ಸ್’ ಎಂದಷ್ಟೇ ಪ್ರತಿಕ್ರಿಯಿಸಿದರು.ಶರಣರು ಆಗಮಿಸುವುದಕ್ಕೂ ಮುನ್ನ ಮಠದ ಆವರಣದಲ್ಲಿದ್ದ ಭಕ್ತರು ಜೈಕಾರ ಕೂಗಿದರು. ಶರಣರು ಆಗಮಿಸಿದ ಬಳಿಕ ಸ್ಥಳದಲ್ಲಿದ್ದ ಮುಖಂಡರು ಜೈಕಾರ ಕೂಗದಂತೆ ತಡೆದರು. ಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಬಳಿಕ ಶಿವಯೋಗಿ ಮಂದಿರದ ಆವರಣದಲ್ಲಿರುವ ಅಥಣಿ ಶಿವಯೋಗಿ ಸ್ವಾಮೀಜಿ ಹಾಗೂ ಜಯದೇವ ಸ್ವಾಮೀಜಿ ಅವರ ಗದ್ದುಗೆಗೆ ಪುಷ್ಪನಮನ ಸಲ್ಲಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಇನ್ನೂ ಒಂದಷ್ಟು ದಿನ ಮೌನ ಕಾಪಾಡಿಕೊಳ್ಳಬೇಕಿದೆ. ಮಾತನಾಡುವ ಸಂದರ್ಭಕಡಿಮೆ ಇದೆ. ಅಧಿಕೃತವಾಗಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ಹಂಚಿಕೊಳ್ಳುವೆ’ ಎಂದು ಹೇಳಿದರು. ಸುದ್ದಿಗಾರರ ಎಲ್ಲಾ ಪ್ರಶ್ನೆಗಳಿಗೂ ‘ನೋ ಕಾಮೆಂಟ್ಸ್’ ಎಂದಷ್ಟೇ ಪ್ರತಿಕ್ರಿಯಿಸಿದರು.ಶರಣರು ಆಗಮಿಸುವುದಕ್ಕೂ ಮುನ್ನ ಮಠದ ಆವರಣದಲ್ಲಿದ್ದ ಭಕ್ತರು ಜೈಕಾರ ಕೂಗಿದರು. ಶರಣರು ಆಗಮಿಸಿದ ಬಳಿಕ ಸ್ಥಳದಲ್ಲಿದ್ದ ಮುಖಂಡರು ಜೈಕಾರ ಕೂಗದಂತೆ ತಡೆದರು. ಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು.













































