ಕೃಷ್ಣನೂರಿನಲ್ಲಿ ‘ನಮೋ’ ರೋಡ್ ಶೋ; ಪ್ರಧಾನಿಗೆ ಹೂ ಮಳೆಯ ಸ್ವಾಗತ

Picture of Savistara

Savistara

Bureau Report

ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠಕ್ಕೆ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡ್ತಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಿಂದ ಉಡುಪಿಗೆ ಸೇನಾ ಹೇಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿಗಳು ಉಡುಪಿಯಲ್ಲಿ ರೋಡ್ ಶೋ ಶುರು ಮಾಡಿದ್ದಾರೆ.

11:05ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನ ರಾಜ್ಯ ಸರ್ಕಾರದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನ‌ರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ರೋಡ್ ಶೋ

ಉಡುಪಿ ನಗರಕ್ಕೆ ಆಗಮಿಸಿದ ಪ್ರಧಾನಿ ರೋಡ್ ಶೋ ಶುರು ಮಾಡಿದ್ದಾರೆ. ಬೆಳಗ್ಗಿನಿಂದಲೂ ಮೋದಿ ಅವರನ್ನ ಕಣ್ಣುಂಬಿಕೊಳ್ಳಲು ಕಾದು ಕುಳಿತಿದ್ದ ಜನ ಪುಷ್ಪವೃಷ್ಟಿ ಮಾಡಿ ಸಂತಸ ಪಟ್ಟಿದ್ದಾರೆ. ಹಾಗೆಯೇ ಯಾರೊಬ್ಬರಿಗೂ ನಿರಾಸೆ ಮಾಡದ ಪ್ರಧಾನಿ ಮೋದಿ ಎಲ್ಲರತ್ತ ಕೈಬೀಸಿ ನಗೆ ಬೀರಿದ್ದಾರೆ.

[t4b-ticker]
error: Content is protected !!