ನವದೆಹಲಿ: ಭಾರತಕ್ಕೆ ಐದಾರು ದೊಡ್ಡ ವಿಮಾನಯಾನ ಸಂಸ್ಥೆಗಳ ಅಗತ್ಯವಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಯಲ್ಲಿ ಹೇಳಿದ್ದಾರೆ.ಇಂಡಿಗೋ ಬಿಕ್ಕಟ್ಟಿನ ಕುರಿತು ಮಾತನಾಡಿದ ಅವರು, ಭಾರತೀಯ ವಿಮಾನಯಾನ ಉದ್ಯಮದಲ್ಲಿ ಹೆಚ್ಚುತ್ತಿರುವ ಸಾಮರ್ಥ್ಯ ಮತ್ತು ಬೇಡಿಕೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ವಲಯದಲ್ಲಿ ಐದು ದೊಡ್ಡ ವಿಮಾನಯಾನ ಕಂಪನಿಗಳಿಗೆ ಪರವಾನಗಿ ನೀಡಲಾಗುವುದು ಎಂದು ಹೇಳಿದ್ದಾರೆ.ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದೆ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಈ ವಿಷಯವನ್ನು ಬಲವಾಗಿ ಎತ್ತಿದೆ. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ರಾಜ್ಯಸಭೆಯಲ್ಲಿ ಇತ್ತೀಚೆಗೆ ಇಂಡಿಗೋ ವಿಮಾನ ರದ್ದತಿಗೆ ವಿಮಾನಯಾನ ಸಂಸ್ಥೆಯೊಳಗಿನ ಆಂತರಿಕ ಸಮಸ್ಯೆಗಳೇ ಕಾರಣ ಎಂದು ಹೇಳಿದ್ದಾರೆ.ಪ್ರಯಾಣಿಕರು, ಪೈಲಟ್ಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು
ಭಾರತಕ್ಕೆ ಐದಾರು ದೊಡ್ಡ ವಿಮಾನಯಾನ ಸಂಸ್ಥೆಗಳ ಅಗತ್ಯವಿದೆ: ಸಚಿವ ರಾಮ್ ಮೋಹನ್ ನಾಯ್ಡು
Savistara
Bureau Report
[t4b-ticker]













































