ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿ.ಎಂ

Picture of Savistara

Savistara

Bureau Report

ಬೆಳಗಾವಿ: ರಾಜ್ಯದ ಸರ್ಕಾರಿ ಇಲಾಖೆಯಲ್ಲಿ 2.88 ಲಕ್ಷ ಹುದ್ದೆಗಳು ಖಾಲಿ ಇವೆ. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದರು. ಸರ್ಕಾರದಲ್ಲಿ ವಿವಿಧ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಆದಷ್ಟೂ ಬೇಗ ಖಾಲಿ ಹುದ್ದೆ ತುಂಬಬೇಕು. 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇವೆ. ನಿಗಮಗಳು, ವಿಶ್ವವಿದ್ಯಾಲಯಗಳಲ್ಲಿ ಹುದ್ದೆ ಖಾಲಿ ಇವೆ. ಧಾರವಾಡ, ವಿಜಯಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಕಾಲ ಮಿತಿಯೊಳಗೆ ಹುದ್ದೆಗಳನ್ನ ಭರ್ತಿ ಮಾಡಿ ಅಂತ ಆಗ್ರಹ ಮಾಡಿದ್ದರು.ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ, 2.84,881 ಹುದ್ದೆಗಳು ಖಾಲಿ ಇವೆ. 24,300 ಹುದ್ದೆ ತುಂಬಲು ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕಿದೆ. ಹೈದರಾಬಾದ್ ಕರ್ನಾಟಕ 371j ಹುದ್ದೆಗಳು 32,132 ಭರ್ತಿ ಮಾಡ್ತೀವಿ. ಒಟ್ಟಾಗಿ 56,432 ಹುದ್ದೆ ಭರ್ತಿ ಮಾಡ್ತಾ ಇದ್ದೇವೆ. ಒಳ ಮೀಸಲಾತಿ ಇದಿದ್ದಕ್ಕೆ ವಿಳಂಬ ಆಯ್ತು. ಈಗ ಒಳ ಮೀಸಲಾತಿ ಇತ್ಯರ್ಥ ಆಗಿದೆ. ಹುದ್ದೆ ಭರ್ತಿ ಮಾಡ್ತೀವಿ ಎ೦ದರು.

ಎಲ್ಲವೂ ಒಟ್ಟಿಗೆ ಮಾಡೋಕೆ ಆಗಲ್ಲ. ಹಂತ ಹಂತವಾಗಿ ಹುದ್ದೆ ಭರ್ತಿ ಮಾಡ್ತೀವಿ ಆರ್ಥಿಕ ಇಲಾಖೆ ಒಪ್ಪಿಗೆ ಕೊಡದೇ ಮಾಡೋಕೆ ಆಗೊಲ್ಲ. ಇಲ್ಲದೇ ಹೋದ್ರೆ ಸಂಬಳ ಕೊಡಲು ಸಾಧ್ಯವಿಲ್ಲ. ನಾನೇ ಫೈನಾನ್ಸ್ ಮಿನಿಸ್ಟರ್. ಹಂತ ಹಂತವಾಗಿ ಖಾಲಿ ಹುದ್ದೆ ತುಂಬಿತ್ತೇವೆ ಎಂದರು. ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ 2.7 ಲಕ್ಷ ಹುದ್ದೆ ತುಂಬೋದಾಗಿ ಸರ್ಕಾರ ಹೇಳಿತ್ತು. ಈಗ 2.5 ವರ್ಷ ಆಯ್ತು ಹುದ್ದೆ ತುಂಬಿಲ್ಲ. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯಲ್ಲಿ ಜಾಸ್ತಿ ಹುದ್ದೆ ಖಾಲಿ ಇದೆ. ಈ ರೀತಿ ಗುಣಮಟ್ಟದ ಎಲ್ಲಿ ಸಿಗಲಿದೆ. ಧಾರವಾಡ ಸೇರಿ ಎಲ್ಲಾ ಕಡೆ ಹೋರಾಟ ಆಗ್ತಿದೆ ಎ೦ದರು.ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರಿಸಿ, 2 ಲಕ್ಷ ಹುದ್ದೆ ತುಂಬೋಕೆ ನಾವು ಟೈಂ ಇಟ್ಟುಕೊಂಡಿದ್ದೇವೆ. ಅದು ನಮ್ಮ ಡ್ಯೂಟಿ ನಾವು ಮಾಡ್ತೀವಿ. ಶಿಕ್ಷಣ ಇಲಾಖೆಯಲ್ಲಿ ಹುದ್ದೆ ಭರ್ತಿ ಮಾಡ್ತಿದ್ದೇವೆ ಎಂದು ಸಿಎಂ ಪರ ಮಾತಾಡಿದ್ರು ಬಳಿಕ ಸಿಎಂ ಮಾತಾಡಿ, ವಿಪಕ್ಷ ನಾಯಕರು ಶಿಕ್ಷಣ, ಆರೋಗ್ಯ, ಜಾಸ್ತಿ ಖಾಲಿ ಇದೆ ಅಂತ ಹೇಳಿದ್ದಾರೆ. ಬಿಜೆಪಿ ಕಾಲದಲ್ಲಿ ಎಲ್ಲಾ ಭರ್ತಿ ಮಾಡಿದ್ರಾ? ಬಿಜೆಪಿ ಕಾಲದಲ್ಲಿ ಖಾಲಿ ಇತ್ತು. ಎಲ್ಲರ ಕಾಲದಲ್ಲಿ ಹುದ್ದೆ ಖಾಲಿ ಇದೆ. ಹಂತ ಹಂತವಾಗಿ ನಾವು ಹುದ್ದೆ ಭರ್ತಿ ಮಾಡ್ತೀವಿ ಅಂತ ತಿಳಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!