ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸಿರುವ ಬಗ್ಗೆ ಕುಕ್ಕೆ ಕ್ಷೇತ್ರ ಸಂರಕ್ಷಣಾ ವೇದಿಕೆ ಅಕ್ಷೇಪ ವ್ಯಕ್ತಪಡಿಸಿದ್ದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳಿಗೆ ಹೆಸರು ಕೈ ಬಿಡುವಂತೆ ಮನವಿ ಸಲ್ಲಿಸಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಧರ್ಮಿಯರನ್ನು, ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದವರನ್ನು, ಹಿಂದೂ ಶ್ರದ್ಧಾಕೇಂದ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದು ಖಂಡನೀಯ. ಹಾಗೂ ಇದು ಸಜ್ಜನ ಭಕ್ತರ ಶ್ರದ್ದೆಯ ಭಾವನೆಗಳಿಗೆ ಧಕ್ಕೆ ಉಂಟಾಗಿರುತ್ತದೆ. ಇದನ್ನು ತಾವುಗಳು ಗಮನಿಸಿ ಅನ್ಯಧರ್ಮಿಯರ ಹೆಸರನ್ನು ಕೈ ಬಿಡದಿದ್ದಲ್ಲಿ ಡಿ 22 ರಂದು ದೇವಳದ ಆಡಳಿತ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಗೊಳ್ಳುತ್ತೇವೆ.
ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಕ್ಷೇತ್ರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಚಿದಾನಂದ ಕಂದಡ್ಕ, ರಾಜೇಶ್ ಯನ್ ಎಸ್,ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸಿರುವ ಬಗ್ಗೆ ಕುಕ್ಕೆ ಕ್ಷೇತ್ರ ಸಂರಕ್ಷಣಾ ವೇದಿಕೆ ಅಕ್ಷೇಪ ವ್ಯಕ್ತಪಡಿಸಿದ್ದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳಿಗೆ ಹೆಸರು ಕೈ ಬಿಡುವಂತೆ ಮನವಿ ಸಲ್ಲಿಸಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಧರ್ಮಿಯರನ್ನು, ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದವರನ್ನು, ಹಿಂದೂ ಶ್ರದ್ಧಾಕೇಂದ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದು ಖಂಡನೀಯ. ಹಾಗೂ ಇದು ಸಜ್ಜನ ಭಕ್ತರ ಶ್ರದ್ದೆಯ ಭಾವನೆಗಳಿಗೆ ಧಕ್ಕೆ ಉಂಟಾಗಿರುತ್ತದೆ.
ಇದನ್ನು ತಾವುಗಳು ಗಮನಿಸಿ ಅನ್ಯಧರ್ಮಿಯರ ಹೆಸರನ್ನು ಕೈ ಬಿಡದಿದ್ದಲ್ಲಿ ಡಿ.22 ರಂದು ದೇವಳದ ಆಡಳಿತ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಗೊಳ್ಳುತ್ತೇವೆ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಕ್ಷೇತ್ರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಚಿದಾನಂದ ಕಂದಡ್ಕ, ರಾಜೇಶ್ ಯನ್ ಎಸ್, ದಿನೇಶ್ ಸಂಪ್ಯಾಡಿ, ಅಚ್ಚುತ ಕುಕ್ಕಪ್ಪನ ಮನೆ, ಶ್ರೀಕುಮಾರ್ ಬಿಲದ್ವಾರ, ರಾಮಚಂದ್ರ ದೇವರಗದ್ದೆ, ದೀಲಿಪ್ ಉಪ್ಪಳಿಕೆ, ಉಪಸ್ಥಿತರಿದ್ದರು













































