ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸ್ಥಾಪಕಾಧ್ಯಕ್ಷರಾದ, ಸುಳ್ಯದ ಶಿಕ್ಷಣ ಸಂಸ್ಥೆಗಳ ರೂವಾರಿಗಳು ಡಾ. ಕುರುಂಜಿ ವೆಂಕಟ್ರಮಣ ಗೌಡರ 97 ನೇ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ ಕುರುಂಜಿ ಯವರ ಪುತ್ಥಳಿಗೆ ಪುಷ್ಪನಮನ ಕಾರ್ಯಕ್ರಮ ನಡೆಯಿತು.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದರು ಪುಷ್ಪನಮನ ಸಲ್ಲಿಸಿದರು.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾರ್ಯದರ್ಶಿ ಡಾ. ಐಶ್ವರ್ಯಾ, ಕೋಶಾಧಿಕಾರಿ ಡಾ. ಗೌತಮ್ ಗೌಡ, ಕಾರ್ಯದರ್ಶಿ ಹೇಮನಾಥ ಕೆ.ವಿ., ಜಗದೀಶ್ ಅಡ್ತಲೆ, ಕೆ.ವಿ.ಜಿ. ಸಂಸ್ಥಾಪಕರ ದಿನಾಚರಣೆ ಅಧ್ಯಕ್ಷ ಡಾ. ಡಿ.ವಿ. ಲೀಲಾಧರ್, ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ಡಾ. ಕೆ.ಟಿ. ವಿಶ್ವನಾಥ, ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ವಿನಯ ಕಂದಡ್ಕ, ಎಂ.ವೆಂಕಪ್ಪ ಗೌಡ, ಮೀನಾಕ್ಷಿ ಹೇಮನಾಥ್ ಕುರುಂಜಿ, ಮೆಡಿಕಲ್ ಕಾಲೇಜು ಮಾಜಿ ಪ್ರಾಂಶುಪಾಲೆ ಶೀಲಾ ಜಿ. ನಾಯಕ್, ಸುಳ್ಯ ಎನ್ನೆಂಸಿ ಪ್ರಾಂಶುಪಾಲ ಡಾ ಎಂ.ಎಂ. ರುದ್ರ ಕುಮಾರ್, ಎನ್ನೆಂಪಿಯುಸಿ ಪ್ರಾಂಶುಪಾಲೆ ಮಿಥಾಲಿ ರೈ, ಮೆಡಿಕಲ್ ಡೀನ್ ಡಾ. ನಾಗಂಬಿಕೆ ನಟರಾಜನ್, ಕಾನೂನು ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಟೀನಾ, ನರ್ಸಿಂಗ್ ಕಾಲೇಜು ಚಂದ್ರಾವತಿ, ಡಾ.ಎನ್.ಎ. ಜ್ಞಾನೇಶ್, ಪ್ರೊ. ಕೆ.ವಿ.ದಾಮೋದರ ಗೌಡ, ಡಾ.ಸಂದೇಶ್, ಎನ್ನೆಂಸಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಸೇರಿದಂತೆ ಕೆ.ವಿ.ಜಿ. ವಿದ್ಯಾಸಂಸ್ಥೆಯ ಸಿಬ್ಬಂದಿಗಳು, ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ರೋಟರಿ, ಲಯನ್ಸ್, ಜೇಸಿಐ ಸುಳ್ಯ ಇಲ್ಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.













































