ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನ‌ರ್ ರಚನೆ: ಸಿದ್ದರಾಮಯ್ಯ

Picture of Savistara

Savistara

Bureau Report

ಮೈಸೂರು: ‘ಸಚಿವ ಸಂಪುಟ ಪುನರ್ ರಚನೆ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಜನವರಿಯಲ್ಲಿ ಚರ್ಚಿಸೋಣ ಎಂದು ಅವರು ಹೇಳಿದ್ದರು. ಸಮಯ ಕೊಟ್ಟಾಗ ದೆಹಲಿಗೆ ಹೋಗಿ ಭೇಟಿಯಾಗುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ತೀರ್ಮಾನಿಸುತ್ತೇನೆ.ಸಂಕ್ರಾಂತಿ ಬಳಿಕ ಬಜೆಟ್‌ ಸಿದ್ಧತೆ ಆರಂಭಿಸುತ್ತೇನೆ’ ಎಂದು ಹೇಳಿದರು.

[t4b-ticker]
error: Content is protected !!