ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುದು ಖಂಡನಿಯವಾಗಿದ್ದು ಪೊಲೀಸ್ ಇಲಾಖೆ ತಕ್ಷಣ ತಪ್ಪಿತಸ್ಥ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ಐವರ್ನಾಡು ಶಕ್ತಿ ಕೇಂದ್ರ ಅಧ್ಯಕ್ಷ ನಂದಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡುವ ಮುಖಾಂತರ ಶಾಸಕಿಯರನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ.ಒಬ್ಬರು ಮಹಿಳೆಯಾಗಿ ಜನಸೇವೆಯಲ್ಲಿ ಕ್ರಿಯಾಶೀಲವಾಗಿರುವ ಶಾಸಕೀಯ ಬಗ್ಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ದಲ್ಲಿ ಈ ರೀತಿಯ ಅಕ್ಷಪಾರ್ಹ, ಅನಾಗರಿಕ ವರ್ತನೆಯನ್ನು ಕ್ಷಮಿಸಲು ಸಾಧ್ಯವಿಲ್ಲ ಪೊಲೀಸ್ ಇಲಾಖೆ ತಕ್ಷಣ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ನಂದಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ
ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಅವಹೇಳನ | ಐವರ್ನಾಡು ಶಕ್ತಿ ಕೇಂದ್ರ ಅಧ್ಯಕ್ಷ ನಂದಕುಮಾರ್ ಖಂಡನೆ
Savistara
Bureau Report
[t4b-ticker]













































