ಬೆಂಗಳೂರು: ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನ ಇಳಿಕೆ ಸೇರಿ ಹಲವು ಕಾರಣಗಳಿಂದ ರಾಜ್ಯದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಕನಿಷ್ಠ ತಾಪಮಾನದಲ್ಲಿ ದಾವಣಗೆರೆ, ವಿಜಯಪುರ, ಬೀದರ್ನಲ್ಲಿ ತಲಾ 9 ಡಿ. ಸೆ., ಧಾರವಾಡ 9.8, ಚಿಂತಾಮಣಿ 10, ಗದಗ 10.8 ಮತ್ತು ಹಾವೇರಿ 10.6 ಡಿ.ಸೆ. ಗುರುವಾರ ದಾಖಲಾಗಿದೆ. ಮುಂದಿನ ಐದು ದಿನಗಳಲ್ಲಿ ಕೆಲ ಪ್ರದೇಶಗಳಲ್ಲಿ 3-5 ಡಿ. ಸೆ. ಉಷ್ಣಾಂಶ ಇಳಿಕೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ
ಮುಂದಿನ 2 ದಿನ ಶೀತ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಪ್ರದೇಶ ಹೊರತುಪಡಿಸಿ ಮೈಸೂರು, ಮಂಡ್ಯ, ಚಿತ್ರದುರ್ಗ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸಾಮಾನ್ಯಗಿಂತ 3-6 ಡಿ.ಸೆ. ಉಷ್ಣಾಂಶ ಇಳಿಕೆಯಾಗಿದೆ. ಹವಾಮಾನ ಬದಲಾವಣೆಯಿಂದ ಬೆಂಗಳೂರು ನಗರ, ಬೆಂ. ದಕ್ಷಿಣ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಮುಂದಿನ 5 ದಿನ ತುಂತುರು ಮಳೆ ಆಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.













































