ಶಿವಮೊಗ್ಗ ಗ್ರಾಮಾಂತರದ ಹಸೂಡಿ ಜಿ.ಪಂ ವ್ಯಾಪ್ತಿಯ ಸಂತೆ ಕಡೂರು ಗ್ರಾಮ ಪಂಚಾಯಿತಿಯಲ್ಲಿ 2025-26ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ (MPLADS) ‘ಆದರ್ಶ ಗ್ರಾಮ’ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಈ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರು ಶ್ರೀ ಕೆ. ಬಿ. ಅಶೋಕ್ ನಾಯಕ್, ಗ್ರಾಂ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಾಲರ, ಬಿಜೆಪಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಗದೀಶ್ ಎನ್. ಕೆ, ಗ್ರಾಂ ಪಂಚಾಯತ್ ಮಾಜಿ ಸದಸ್ಯರು ಶ್ರೀ ಶ್ರೀನಿವಾಸ್, ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ, ಶ್ರೀ ಶ್ರೀಧರ್ ಸೇರಿದಂತೆ ವೇದಿಕೆ ಮೇಲೆ ಗಣ್ಯರು ಮತ್ತು ಗ್ರಾಮದ ನಿವಾಸಿಗಳು ಪಾಲ್ಗೊಂಡಿದರು.













































