ಪಕ್ಷ ವಿರೋಧಿ ಚಟುವಟಿಕೆ ಆರೋಪ! ಬೈಂದೂರು ಬಿಜೆಪಿ ನಿಕಟ ಪೂರ್ವ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ 6 ವರ್ಷ ಉಚ್ಛಾಟನೆ!

Picture of Savistara

Savistara

Bureau Report

ಉಡುಪಿ : ಬೈಂದೂರು ಬಿಜೆಪಿ ಮಂಡಲದ ನಿಕಟ ಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.ಈ ಕುರಿತು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಅವರು ಅಧಿಕೃತ ನೋಟಿಸ್ ಕಳುಹಿಸಿದ್ದಾರೆ.ನೋಟಿಸ್‌ನಲ್ಲಿ, ಪಕ್ಷದ ಜಿಲ್ಲಾ ಮುಖಂಡರು ನೀಡಿದ್ದ ಸ್ಪಷ್ಟ ಹಾಗೂ ಪುನರಾವರ್ತಿತ ಸೂಚನೆಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ, ಪಕ್ಷದ ಅಧಿಕೃತ ವೇದಿಕೆಗಳನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಪಕ್ಷದ ಘನತೆ, ಶಿಸ್ತು ಮತ್ತು ಏಕತೆಗೆ ಗಂಭೀರ ಹಾನಿ ಉಂಟುಮಾಡಿದೆ ಎಂದು ಉಲ್ಲೇಖಿಸಲಾಗಿದೆ.ಇದಲ್ಲದೆ, ಪಕ್ಷದ ನೇತೃತ್ವದ ವಿರುದ್ಧ ನಿರಂತರವಾಗಿ ಅವಮಾನಕಾರಿಯಾಗಿ ಮಾತನಾಡುವುದರಿಂದ ಕಾರ್ಯಕರ್ತರಲ್ಲಿ ಗೊಂದಲ, ಅಸಮಾಧಾನ ಹಾಗೂ ಭಿನ್ನಾಭಿಪ್ರಾಯಗಳು ಉಂಟಾಗಿದ್ದು, ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.ಈ ಎಲ್ಲಾ ಅಶಿಸ್ತಿನ, ಜವಾಬ್ದಾರಿಯಿಲ್ಲದ ಹಾಗೂ ಪಕ್ಷವಿರೋಧಿ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಉನ್ನತ ನಾಯಕತ್ವದ ಆದೇಶದ ಮೇರೆಗೆ ದೀಪಕ್ ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಅನಿತಾ ಆರ್.ಕೆ. ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!