ಪಂಪ್‌ವೆಲ್‌–ಕರಾವಳಿ ಜಂಕ್ಷನ್ ರಸ್ತೆ ದುರಸ್ತಿ : ಸಂಚಾರ ವ್ಯವಸ್ಥೆ ಈ ರೀತಿ ಇದೆ

Picture of Savistara

Savistara

Bureau Report

ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಎಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದ್ದು, ಸದ್ರಿ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಲಿದ್ದು, ಸಾರ್ವಜನಿಕರು ಈ ಕೆಳಗಿನ ರಸ್ತೆಯನ್ನು ಉಪಯೋಗಿಸಬಹುದಾಗಿದೆ.

👉1. ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

👉2. ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸುವುದು.

👉3. ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರಿ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ನಿAದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸುವುದು.

👉4. ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವಾತ್ತಾಗಿ ಸಂಚರಿಸುವುದು.

👉5. ಕಂಕನಾಡಿ ಜಂಕ್ಷನ್-ಪಂಪುವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ಸದರಿ ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿ.

ಪೊಲೀಸ್ ಆಯುಕ್ತರುಮಂಗಳೂರು ನಗರ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!