RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Picture of Savistara

Savistara

Bureau Report

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ RSS ವಿರುದ್ಧ ವಾಗ್ದಾಳಿ ನಡೆಸಿದರು. ಆರ್ ಎಸ್ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನು ಹೇರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಯಾಗಿರುತ್ತಾರೆ. ಇದ್ಯಾವ ರೀತಿ? ಧರ್ಮ ರಕ್ಷಣೆ ಎಂದು ಪ್ರಶ್ನಿಸಿದರು. ದೇಣಿಗೆ ಹೇಗೆ ಬರುತ್ತದೆ ಎಂದು ಕೇಳಿದರೆ RSS ಬಳಿ ಉತ್ತರವಿಲ್ಲ. RSS ರಿಜಿಸ್ಟರ್ ಮಾಡುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಇಂದಲ್ಲ ನಾಳೆ ಆರ್ ಎಸ್ಎಸ್ ರಿಜಿಸ್ಟರ್ ಆಗಲೇಬೇಕು. ಇಲ್ಲವಾದಲ್ಲಿ ನಾನೇ ಮಾಡಿಸುತ್ತೇನೆ ಎಂದರು.

[t4b-ticker]
error: Content is protected !!