ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Picture of Savistara

Savistara

Bureau Report

ಮುಂಬೈ: ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರ ಬುಧವಾರ ರಾಜ್ಯದ ಮುಸ್ಲಿಮರಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.10 ವರ್ಷಗಳ ಹಿಂದೆ ಅಂದರೆ 2014 ರಲ್ಲಿ ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡಾ 5 ರಷ್ಟು ಮೀಸಲಾತಿಯನ್ನು ಘೋಷಿಸಿತು. ಅಲ್ಲದೆ ಈ ಸಂಬಂಧ ಚುನಾವಣೆಗೆ ಮುಂಚಿತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆಯು ರದ್ದಾಗಿತ್ತು.

ಇದೀಗ ಮಹಾರಾಷ್ಟ್ರ ಸರ್ಕಾರವು 2014 ಮತ್ತು 2015 ರಲ್ಲಿ ಈ ನಿಟ್ಟಿನಲ್ಲಿ ಹೊರಡಿಸಲಾದ ಎಲ್ಲಾ ಆದೇಶಗಳನ್ನು ಈಗ ರದ್ದುಗೊಳಿಸಿದೆ.”ರಾಜ್ಯ ಸರ್ಕಾರದ ಈ ಕ್ರಮದ ವಿರುದ್ಧ ಈ ಬಗ್ಗೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದು, “ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮುಸ್ಲಿಮರಿಗೆ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ನಿರ್ಧಾರವು ಬಿಜೆಪಿಯ ವೈರಿಗಳು, ಬಿಜೆಪಿಯ ಮುಸ್ಲಿಂ ನಾಯಕರು ಮತ್ತು ಅವರ ಮಿತ್ರಪಕ್ಷಗಳನ್ನು ಗೌರವಿಸುವುದಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ಇದು ಬಿಜೆಪಿಯ ಮುಸ್ಲಿಂ ನಾಯಕರು ನ್ಯಾಯ ಪಡೆಯಲು ಅಸಮರ್ಥರಾಗಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ” ಎಂದು ಎನ್‌ಸಿಪಿ-ಎಸ್‌ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!